Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:14
35 ತಿಳಿವುಗಳ ಹೋಲಿಕೆ  

ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.


ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.


ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು