Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರ್ಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:5
27 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.


ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.


ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.


ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು