Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:7
23 ತಿಳಿವುಗಳ ಹೋಲಿಕೆ  

ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.


ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.


ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,


ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,


ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.


ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,


ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು