Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:12
39 ತಿಳಿವುಗಳ ಹೋಲಿಕೆ  

ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,


ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.


ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”


ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;


ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.


ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,


ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.


ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು