Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:4
12 ತಿಳಿವುಗಳ ಹೋಲಿಕೆ  

ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.


ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.


ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.


ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು