Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:11
32 ತಿಳಿವುಗಳ ಹೋಲಿಕೆ  

ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.


ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.


ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.


ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.


“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.


ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,


ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.


‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.


ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು


ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು