Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:2
20 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”


ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,


ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು