Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ದೂಳಿನಂತೆಯೂ ಬಂಗಾರವನ್ನು ಬೀದಿಯ ಬದಿಯಂತೆಯೂ ರಾಶಿರಾಶಿ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:3
16 ತಿಳಿವುಗಳ ಹೋಲಿಕೆ  

ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.


ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,


ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.


ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?


ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.


ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.


ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.


ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.


ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು