Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:4
14 ತಿಳಿವುಗಳ ಹೋಲಿಕೆ  

ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.


ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!


ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.


“‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


“ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.


ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು