Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:7
21 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.


ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”


ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.


ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು