Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:16
9 ತಿಳಿವುಗಳ ಹೋಲಿಕೆ  

ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,


ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.


ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.


ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.


ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,


ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.


ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು