Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:1
21 ತಿಳಿವುಗಳ ಹೋಲಿಕೆ  

ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.


ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.


ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು