Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶಿಷ್ಟರ ಉದ್ದೇಶ ನ್ಯಾಯ; ದುಷ್ಟರ ಆಲೋಚನೆ ಮೋಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:5
20 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.


ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು.


ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು