Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:12
20 ತಿಳಿವುಗಳ ಹೋಲಿಕೆ  

ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು.


ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.


ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು