Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳುವಳಿಕೆಯಿಂದ ನಡಿಸುವನು; ಮೂಢನು ತನ್ನ ಮೂರ್ಖತನವನ್ನು ಡಂಭವಾಗಿ ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:16
16 ತಿಳಿವುಗಳ ಹೋಲಿಕೆ  

ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.


ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.


ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು