Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಈಡು; ಬಡವನಿಗೆ ಯಾವ ಬೆದರಿಕೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:8
15 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.


ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.


ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.


ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.


ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.


ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು