Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:16
27 ತಿಳಿವುಗಳ ಹೋಲಿಕೆ  

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.


ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,


ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,


ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು