Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:17
18 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.


ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.


ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.


ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು