Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:22
19 ತಿಳಿವುಗಳ ಹೋಲಿಕೆ  

ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.


ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.


ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.


ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.


ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.


ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.


ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.


ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.


ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು