Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವದು; ಯಥಾರ್ಥವಂತರಲ್ಲಿ [ದೇವರ] ದಯೆಯಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:9
15 ತಿಳಿವುಗಳ ಹೋಲಿಕೆ  

ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.


ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.


ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.


“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.


ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.


ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.


ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು