Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:1
16 ತಿಳಿವುಗಳ ಹೋಲಿಕೆ  

ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.


ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.


ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.


ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು