Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:10
20 ತಿಳಿವುಗಳ ಹೋಲಿಕೆ  

ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.


ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.


ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.


ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.


ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.


ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು