Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:28
17 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.


ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.


ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.


ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.


ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು