Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ದೇವರ] ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು; ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:20
22 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.


ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.


ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.


ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು