Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:15
23 ತಿಳಿವುಗಳ ಹೋಲಿಕೆ  

ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.


ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.


ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”


ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.


ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ.


ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.


ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!


ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ,


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು