Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅನ್ಯಾಯಹೊಂದಿದ ಸಹೋದರನು ಬಲವಾದ ಪಟ್ಟಣಕ್ಕಿಂತಲೂ ಅಸಾಧ್ಯ; ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:19
17 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.


ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.


ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.


ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.


ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು