Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:23
18 ತಿಳಿವುಗಳ ಹೋಲಿಕೆ  

ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.


ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.


ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,


ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.


ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.


ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು