Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:20
21 ತಿಳಿವುಗಳ ಹೋಲಿಕೆ  

ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.


ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.


ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.


ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.


ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.


ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.


ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.


ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.


ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು