Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ವಿುತ್ರನು; ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:8
17 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.


ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.


ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.


ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.


ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು