Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೊದಲು ಬೇಗನೆ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಶುಭವನ್ನು ಹೊಂದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:21
13 ತಿಳಿವುಗಳ ಹೋಲಿಕೆ  

ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.


“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.


ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.


ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.


ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.


ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.


ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು