Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:20
20 ತಿಳಿವುಗಳ ಹೋಲಿಕೆ  

ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.


ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.


ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.


ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,


ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.


ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.


ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.


ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.


ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.


ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು