Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:29
19 ತಿಳಿವುಗಳ ಹೋಲಿಕೆ  

ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.


ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.


ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.


ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.


ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.


ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.


ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.


ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.


ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು