Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:29
16 ತಿಳಿವುಗಳ ಹೋಲಿಕೆ  

ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,


ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;


ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!


ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.


ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.


ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.


ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು