Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀನು ಸಮುದ್ರ ಮಧ್ಯದಲ್ಲಿ ಮಲಗಿ ಇರುವವನಂತೆ ಇರುವೆ, ಹಡಗಿನ ಕಂಬದ ತುದಿಯಲ್ಲಿ ನಿದ್ರಿಸುವವನಂತೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ಸಮುದ್ರದ ನಡುವೆಯಾಗಲಿ ಹಡಗಿನ ಕಂಬದ ತುದಿಯಲ್ಲಾಗಲಿ ಮಲಗಿರುವವನಂತೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀನು ಮಲಗಿಕೊಂಡಾಗ ಸಮುದ್ರದ ಅಲ್ಲೋಲಕಲ್ಲೋಲ ಅಲೆಗಳ ಮೇಲಿರುವಂತೆಯೂ ಹಡಗಿನ ಮೇಲೆ ಮಲಗಿಕೊಂಡಿರುವಂತೆಯೂ ನಿನಗನ್ನಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀನು ಸಮುದ್ರದ ಮಧ್ಯದಲ್ಲಿ ಮಲಗಿರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:34
14 ತಿಳಿವುಗಳ ಹೋಲಿಕೆ  

“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.


ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.


ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು