Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:16
30 ತಿಳಿವುಗಳ ಹೋಲಿಕೆ  

ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.


ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.


ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?


ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು