Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:21
16 ತಿಳಿವುಗಳ ಹೋಲಿಕೆ  

ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.


ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು


ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.


ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು