Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:9
16 ತಿಳಿವುಗಳ ಹೋಲಿಕೆ  

ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.


ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.


ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು