Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:8
12 ತಿಳಿವುಗಳ ಹೋಲಿಕೆ  

“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.


ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.


ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.


ಅವರು ಕತ್ತಿಯನ್ನು ತರಲು ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ” ಎಂದು ಅಪ್ಪಣೆ ಮಾಡಿದನು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು