Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:18
35 ತಿಳಿವುಗಳ ಹೋಲಿಕೆ  

ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.


ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?


ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.


ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.


ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.


ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.


ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.


ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.


ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.


ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,


ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.


ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.


ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.


ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.


ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.


ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.


ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು