Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:21
14 ತಿಳಿವುಗಳ ಹೋಲಿಕೆ  

ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.


“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.


“ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು