Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:8
17 ತಿಳಿವುಗಳ ಹೋಲಿಕೆ  

ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.


ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.


ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.


ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು