Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು; ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:20
22 ತಿಳಿವುಗಳ ಹೋಲಿಕೆ  

ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.


ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.


ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.


ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು