Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು; ತನಗೆ ಕೊರತೆಯಾಗುವದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:22
11 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.


ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.


ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.


ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.


ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು