Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು; ಯಥಾರ್ಥವಂತರ ಪ್ರಾಣಕ್ಕೂ ಹೊಂಚುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:10
24 ತಿಳಿವುಗಳ ಹೋಲಿಕೆ  

ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.


ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.


ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.


ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.


ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು