Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:18
21 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.


ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.


ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,


ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.


ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು