Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:2
22 ತಿಳಿವುಗಳ ಹೋಲಿಕೆ  

ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.


ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.


ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.


ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.


ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು