Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲಿ ನಾಶನಕ್ಕಾಗಲಿ ಹೆದರಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:25
22 ತಿಳಿವುಗಳ ಹೋಲಿಕೆ  

ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.


ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.


ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು


ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು