Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:3
23 ತಿಳಿವುಗಳ ಹೋಲಿಕೆ  

ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.


“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,


ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.


ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.


ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು