Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನವನ್ನು ಪಡೆಯಬೇಕೆಂಬದೇ ಜ್ಞಾನಬೋಧೆಯ ಪ್ರಥಮಪಾಠ; ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ ವಿವೇಕವನ್ನು ಪಡೆಯಲು ನಿನಗಿರುವದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:7
18 ತಿಳಿವುಗಳ ಹೋಲಿಕೆ  

ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.


ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.


ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.


ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು