Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಟ್ಟಕಡೆಗೆ ನಿನ್ನ ದೇಹವೆಲ್ಲ ಕರಗಿಹೋದೀತು; ಅಂಗಲಾಚಿ ನೀ ಕೊರಗಬೇಕಾದೀತು ಇಂತೆಂದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೊನೆಯಲ್ಲಿ, ನಿನ್ನ ಆರೋಗ್ಯವೆಲ್ಲಾ ಕೆಟ್ಟುಹೋಗಿ ನಿನ್ನಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀನು ಗೋಳಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:11
12 ತಿಳಿವುಗಳ ಹೋಲಿಕೆ  

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.


“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು